ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಕಿಡಿಗೇಡಿಗಳು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಕಿಡಿಗೇಡಿಗಳು – Vishwanews24

ಮಂಗಳೂರು : ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ .

ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ ಬಂದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದ್ದು, ಕಟ್ಟೆಯ ಬಳಿ ಇರುವ ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ದುಷ್ಕರ್ಮಿಗಳು ಆಗಮಿಸಿ ಈ ಕೃತ್ಯ ಎಸಗಿರುವ ವಿಡಿಯೋ ದಾಖಲಾಗಿದೆ.

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕೃತ್ಯ ನಡೆಸಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.

ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕುಂದಾಪುರ:ಮೆಹಂದಿ ಕಾರ್ಯಕ್ರಮದಲ್ಲಿ ಮನೆಗೆ ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್‌ ನಡೆಸಿದ ಕೋಟ ಠಾಣೆಯ ಪೊಲೀಸರು – Vishwanews24

 

 

Leave a Reply