ಮಂಗಳೂರು : ಗುಡ್ಡ ಕುಸಿತ ಪ್ರಕರಣ- ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು

ಉಳ್ಳಾಲ : ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ ಮೇಲೆ ಬೃಹತ್‌ ಮರ ಸಹಿತ ಸುಮಾರು 30 ಅಡಿ ಧರೆ ಕುಸಿದು ಬಿದ್ದಿತ್ತು. ಶುಕ್ರವಾರ ಮುಂಜಾನೆ ಸುಮಾರು 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.

ಬಂಟ್ವಾಳ : ಅಕ್ಕಿ ಸಾಗಾಟದ ಲಾರಿ ಪಲ್ಟಿ- ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24

ಘಟನೆ ನಡೆದ ವೇಳೆ ಮನೆ ಯಜಮಾನ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮಾ, ಪುತ್ರ ಸೀತಾರಾಮ ಮತ್ತು ಅವರ ಪತ್ನಿ ಅಶ್ವಿನಿ ಮಕ್ಕಳಾದ ಆರುಷ್‌, ಆರ್ಯನ್‌ ಮಲಗಿದ್ದರು. ಸೀತಾರಾಮ ಅವರು ಮನೆಯಿಂದ ಹೊರಬರಲು ಯಶಸ್ವಿಯಾಗಿದ್ದಾರೆ. ಪ್ರೇಮಾ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅವರ ಮೃತದೇಹವೂ ಮಣ್ಣಿನಡಿಯಲ್ಲೇ ಇದೆ. ಕಾಂತಪ್ಪ ಪೂಜಾರಿ ಅವರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.

ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54 ವ) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್‌‌, ಎರಡು ವರ್ಷ ಪ್ರಾಯದ ಆರುಷ್ (2 ವರ್ಷ) ಮೃತಪಟ್ಟಿದ್ದಾರೆ. ಆರುಷ್‌ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಎನ್‌ ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಪ್ರೇಮ ಅವರ ಮೃತದೇಹವನ್ನು ಹುಡುಕಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಮಂಜನಾಡಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು -ಮೃತರ ಸಂಖ್ಯೆ 2ಕ್ಕೆ ಏರಿಕೆ – vishwanews24

Leave a Reply