ಮಂಗಳೂರು : ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ : ಬಸವರಾಜ್ ಬೊಮ್ಮಾಯಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ : ಬಸವರಾಜ್ ಬೊಮ್ಮಾಯಿ 

ಮಂಗಳೂರು: ಕೋಟಿಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾದ್ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು ಸಂಘಟನೆಗಳು ಹೋರಾಟ ಮಾಡುತ್ತಿರತ್ತವೆ, ಅವರಿಗೂ ಪಕ್ಷಕ್ಕೆ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ನಂತರ ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕುದ್ರೋಳಿಯ ಯುವಕ ಮೃತ್ಯು – Vishwanews24

Leave a Reply