ಮಂಗಳೂರು: ಜಾನುವಾರು ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಶ್ವಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ – vishwanews24
ಮಂಗಳೂರು: ಜಾನುವಾರು ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಶ್ವಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ..
ರಾಜ್ಯ ಸರಕಾರ ಗೋಹಂತಕರ ಬೆಂಬಲಕ್ಕೆ ನಿಂತಿದೆ : ವಜ್ರದೇಹಿ ಸ್ವಾಮೀಜಿ ಆಕ್ರೋಶ
ಮಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸರಕಾರ ಬಲಹೀನಗೊಳಿಸಲು ಹೊರಟಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಹಾಗು ಬಜರಂಗದಳ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕ್ಲಾಕ್ ಟಾವರ್ ಎದುರು ಪ್ರತಿಭಟನಾ ಸಭೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಸರಕಾರದ ವಿರುದ್ದ ಘೋಷಣೆ ಕೂಗಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸಡಿಲುಗೊಳಿಸಿ ತಿದ್ದುಪಡಿ ತಂದು ಗೋಹಂತಕರಿಗೆ ನೀಡಲು ಸರಕಾರ ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಉಳ್ಳಾಲ : ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ; ಮೂವರು ಅರೆಸ್ಟ್ – vishwanews24
ರಾಜ್ಯ ಸರಕಾರ ಗೋಹಂತಕರ ಬೆಂಬಲಕ್ಕೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಜ್ರದೇಹಿ ಮಠದ ರಾಜಶೀಖರಾನಂದ ಸ್ವಾಮಿ, ಈ ಕೂಡಲೇ ತಿದ್ದುಪಡಿ ಕೈಬಿಡಬೇಕು ಹಾಗು ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಕಾನೂನನ್ನು ಮತ್ತಷ್ಟು ಬಲಪಡಿಸಬೇಕೆಂದು ಆಗ್ರಹಿಸಿದರು.
