ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದು  ಆತ್ಮಹತ್ಯೆ

ಮಂಗಳೂರು: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.

ಮೃತ ಯುವಕನನ್ನು ಕಾಪಿಕಾಡು, ಸತ್ಯನಾರಾಯಣ ನಿವಾಸಿ ನಿತಿನ್ ಪೂಜಾರಿ (36) ಎಂದು ಗುರುತಿಸಲಾಗಿದೆ.

ನಿತಿನ್ ಬುಧವಾರ ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದ ಎನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು, ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡ ಅವರು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ಬೆಳಕಿಗೆ ಬಂದಿದೆ.

ಬಂಟ್ವಾಳ : ಮಹಮ್ಮದ್ ಸಾವದ್ ಕೊಲೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ – Vishwanews24

ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ.ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.

ಮೃತ ನಿತಿನ್ ಈ ಮೊದಲು ಮಾಂಡೊವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು,ಈಗ ಸಿಕ್ಕಿದ ಸಣ್ಣ,ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ.ನಿತಿನ್ ಅಕ್ಕ,ಬಾವ,ಅಮ್ಮನನ್ನ ಅಗಲಿದ್ದಾರೆ.

ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿ ಕೊಂಡಿದ್ದಾರೆ.

ಉಡುಪಿ:  ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆ ಮುಚ್ಚಲು ಆದೇಶ – Vishwanews24

Leave a Reply