ಮಂಗಳೂರು: ದೇವಸ್ಥಾನ ಹೋಲುವ ಜಾಗ ಮತ್ತು ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟ್ ತಡೆಯಾಜ್ಞೆ ;  ವಿಹೆಚ್‌ ಪಿ ಸ್ವಾಗತ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ದೇವಸ್ಥಾನ ಹೋಲುವ ಜಾಗ ಮತ್ತು ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟ್ ತಡೆಯಾಜ್ಞೆ ;  ವಿಹೆಚ್‌ ಪಿ ಸ್ವಾಗತ

ಮಂಗಳೂರು: ದೇವಸ್ಥಾನ ಹೋಲುವ ಜಾಗ ಮತ್ತು ಕಟ್ಟಡದಲ್ಲಿ ಯಾವುದೇ ಕಾಮಗಾರಿ ,ಕಟ್ಟಡಕ್ಕೆ ಹಾನಿಯಾಗದಂತೆ ತಡೆಯಾಜ್ಞೆ ಹಾಗೂ ದೇವಸ್ಥಾನ ಹೋಲುವ ಕಟ್ಟಡದ ಒಳಗಡೆ ಪ್ರವೇಶ ನಿಷೇಧಗೊಳಿಸಿದ ಕೋರ್ಟ್ ಆದೇಶವನ್ನು ವಿಶ್ವ ಹಿಂದೂ ಪರಿಷದ್‌ ಸ್ವಾಗತಿಸಿದೆ

ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂಧರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ, ಗಂಜಿಮಠ ನಿವಾಸಿಯಾದ ಧನಂಜಯರವರು ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಸದ್ರಿ ಜಾಗದಲ್ಲಿ ದೇವಸ್ಥಾನವನ್ನು ಹೋಲುವ ಕಟ್ಟಡವಿದೆಯೆಂದು ಮನಗಂಡು ಸದ್ರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಮತ್ತು ದೇವಸ್ಥಾನ ಹೋಲುವ ಕಟ್ಟಡಕ್ಕೆ ಯಾವುದೇ ಹಾನಿಯಾಗದಂತೆ ತಡೆಯಾಜ್ಞೆ ಕೊಟ್ಟಿದೆ ಹಾಗೂ ಆ ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲಿ ಮತ್ತು ಅನುಯಾಯಿಗಳಾಗಲಿ ಪ್ರವೇಶವನ್ನು ನಿಷೇಧಿಸಿ ಆದೇಶಿಸಿದ್ದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಹಾಗೂ ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಜಿಲ್ಲೆಯ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನ ಪ್ರಯೋಜನ ಒದಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ – Vishwanews24

Leave a Reply