ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್ – vishwanews24
ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್
ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಉಪಮೇಯರ್ ಭಾನುಮತಿ ಪಿ.ಎಸ್
ಮಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಅತೀ ದೊಡ್ಡ ಹಾಗೂ ಶೀಘ್ರ ಗತಿಯಲ್ಲಿ ಬೆಳೆವಣಿಗೆ ಕಾಣುತ್ತಿರುವ ಮಂಗಳೂರು ನಗರದ ಅಭಿವೃದ್ಧಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದು ನೂತನ ಮೇಯರ್ ಆಗಿ ಆಯ್ಕೆಯಾದ ಮನೋಜ್ ಕುಮಾರ್ ಕೋಡಿಕಲ್ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಮೊದಲ ಬಾರಿ ಮನಪಾ ಸದಸ್ಯನಾ ಗಿರುವ ನನಗೆ ಮೇಯರ್ ಅವಕಾಶ ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷಕ್ಕೆ, ನಾಯಕರಿಗೆ ನಾನು ಅಭಾರಿಯಾಗಿ ದ್ದೇನೆ. ಈ ಹಿಂದಿನ ನಾಲ್ಕು ಮೇಯರ್ಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಅವರನ್ನು ಮಾದರಿಯಾಗಿಟ್ಟು ಆ ಯೋಜನೆಗಳ ಜತೆ ಮತ್ತಷ್ಟು ರೂಪುರೇಷೆಗಳನ್ನು ರಚಿಸಿ ಮುಂದುವರಿಯುತ್ತೇನೆ. ನಗರದ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತೇನೆ. ಭೌಗೋಳಿಕತೆ, ಪ್ರಾಕೃತಿಕವಾಗಿ ಮಂಗಳೂರು ನಗರದ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ನನ್ನ ಆಡಳಿತ ಅವಧಿಯಲ್ಲಿ ಪ್ರತಿಪಕ್ಷ ನಾಯಕರು, ಎಲ್ಲ ಸದಸ್ಯರು, ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು.
ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ :ಶೋಭಾ ಕರಂದ್ಲಾಜೆ – vishwanews24
ಭಾರತೀಯ ಜನತಾ ಪಕ್ಷ ನನಗೆ ಉಪಮೇಯರ್ ಸ್ಥಾನ ನೀಡಿ ದೊಡ್ಡ ಜವಾಬ್ದಾರಿ ನೀಡಿದ್ದು, ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಅಭಾರಿಯಾಗಿದ್ದೇನೆ. ಆಡಳಿತಾವಧಿಯಲ್ಲಿ ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಪಮೇಯರ್ ಭಾನುಮತಿ ಪಿ.ಎಸ್. ಹೇಳಿದರು.
