ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು -Vishwanews24
ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ.
ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಆಕೆಯ ಮೃತದೇಹ ಪತ್ತೆಯಾಗಿದೆ.
ಅನುಪಮಾ ತಾಯಿ ವಿದೇಶದಲ್ಲಿದ್ದು, ಈಕೆ ಈ ಅಪಾರ್ಟ್ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯ ಹೂಡಿದ್ದಳು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
