ಮಂಗಳೂರು : ಪಕ್ಷಾಂತರ ಮಾಡುವುದು ದೇಶದ್ರೋಹದ ಕೆಲಸ :ಶೆಟ್ಟರ್ ವಿರುದ್ದ ಜನಾರ್ಧನ ಪೂಜಾರಿ ಆಕ್ರೋಶ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಪಕ್ಷಾಂತರ ಮಾಡುವುದು ದೇಶದ್ರೋಹದ ಕೆಲಸ : ಶೆಟ್ಟರ್ ವಿರುದ್ದ ಜನಾರ್ಧನ ಪೂಜಾರಿ ಆಕ್ರೋಶ

ಮಂಗಳೂರು : ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರ್ಪಡೆಯಾಗಿ ಇದೀಗ ಮತ್ತೆ ಬಿಜೆಪಿ ಗೆ ಬಂದ ಜಗದೀಶ್ ಶೆಟ್ಟರ್ ವಿರುದ್ದ ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ಬಂದ ಜಗದೀಶ ಶೆಟ್ಟರ್‌, ಈಗ ಲೋಕಸಭಾ ಚುನಾವಣೆ ಎದುರಿನಲ್ಲಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ರೀತಿ ಪಕ್ಷಾಂತರ ಮಾಡುವುದು ದೇಶದ್ರೋಹದ ಕೆಲಸ’ ಎಂದು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ಉಡುಪಿ- ಚಿಕ್ಕಮಗಳೂರು ಕ್ಷೇತದಲ್ಲಿ ಬಿಜೆಪಿಯಿಂದ ಪ್ರಮೋದ್ ಮಧ್ವರಾಜ್‌ಗೆ ಟಿಕೆಟ್ ನೀಡಲು ಮೀನುಗಾರ ಸಂಘಟನೆ ಮುಖಂಡರ ಆಗ್ರಹ – vishwanews24

‘ಬಿಜೆಪಿಯಲ್ಲಿ ಅವರಿಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಕಾಂಗ್ರೆಸ್‌ಗೆ ಬಂದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಅವರು ಪರಾಭವಗೊಂಡರೂ, ಅನೇಕ ಕಾಂಗ್ರೆಸ್ ಹಿರಿಯ ಕಾರ್ಯಕರ್ತರನ್ನು ಬದಿಗಿಟ್ಟು, ಶೆಟ್ಟರ್‌ ಅವರಿಗೆ ವಿಧಾನ ಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. ಆದರೆ, ಈಗ ಈ ರೀತಿ ಬೆಳವಣಿಗೆ ಆಗಿದ್ದು ಸರಿಯಲ್ಲ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.

Leave a Reply