ಮಂಗಳೂರು : ಬಸ್ ಡಿಕ್ಕಿ ಪ್ರಕರಣ ; ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ಯುವತಿಯ ತಾಯಿ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಬಸ್ ಡಿಕ್ಕಿ ಪ್ರಕರಣ ; ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೃತ ಯುವತಿಯ ತಾಯಿ

ಮಂಗಳೂರು : ನಗರದ ನಂತೂರು ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ಸಂಭವಿಸಿದ ಹೃದಯ ವಿದ್ರಾವಕ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ದೀಪ್ತಿ (24) ಎಂಬ ಯುವತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಅತ್ಯಂತ ನೋವಿನ ಅಂಶವೆಂದರೆ, ಸ್ಕೂಟರ್‌ಗೆ ಡಿಕ್ಕಿ ಹೊಡೆದ ಅದೇ ಬಸ್‌ನಲ್ಲಿ ಅವರ ತಾಯಿಯೂ ಪ್ರಯಾಣಿಸುತ್ತಿದ್ದರು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕೆಯಾಗಿರುವ ಶಾಲಿನಿ ಅವರ ಐದು ಹೆಣ್ಣುಮಕ್ಕಳಲ್ಲಿ ದೀಪ್ತಿ ಹಿರಿಯವಳು. ಪ್ರೀತಿಯ ಅಕ್ಕನನ್ನು ಕಳೆದುಕೊಂಡ ಕಿರಿಯ ಸಹೋದರಿಯರ ಆಕ್ರಂದನ ಮುಗಿಲುಮುಟ್ಟಿತ್ತು.

ಇದನ್ನೂ ಓದಿ👇

ಕಾಪು : ರಿಕ್ಷಾ ನಿಲ್ದಾಣ ತೆರವುಗೊಳಿಸಲು ಹೈಕೋರ್ಟ್‌ ಆದೇಶ ;  ತೆರವಿಗೆ ಮುಂದಾದ ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಪ್ರತಿಭಟನೆ – vishwanews24

Leave a Reply