ಮಂಗಳೂರು: ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ.

ಉಡುಪಿ : ಹಿಮಾಚಲ ಪ್ರದೇಶ ಚುನಾವಣೆ ಕೂಡ ಮುಂದಿನ ಕರ್ನಾಟಕ ಚುನಾವಣೆಗೆ ಯಾಕೆ ದಿಕ್ಸೂಚಿಯಾಗಬಾರದು : ಪ್ರಖ್ಯಾತ್ ಶೆಟ್ಟಿ – Vishwanews24

ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ಮಂಗಳೂರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ : ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ – Vishwanews24

Leave a Reply