ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು – vishwanews24
ಮಂಗಳೂರು: ಭಾರೀ ಮಳೆಗೆ ರಾಜಕಾಲುವೆಗೆ ಉರುಳಿ ಬಿದ್ದ ಆಟೋ : ಚಾಲಕ ಸಾವು
ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಆಟೋ ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ.
ದೀಪಕ್ (40) ಮೃತ ಆಟೋ ಚಾಲಕ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ.
ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು – vishwanews24
ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದು, ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ
