ಮಂಗಳೂರು: ಮತ್ತೊಬ್ಬ ರೌಡಿ ಶೀಟರ್ ನ ಬರ್ಬರ ಹತ್ಯೆ…!! ಮಂಗಳೂರು ಹೊರವಲಯದ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…!!vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮತ್ತೊಬ್ಬ ರೌಡಿ ಶೀಟರ್ ನ ಬರ್ಬರ ಹತ್ಯೆ…!! ಮಂಗಳೂರು ಹೊರವಲಯದ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…!!vishwanews24

ಮಂಗಳೂರು : ಬರ್ಕೆ ಠಾಣಾ ವ್ಯಾಪ್ತಿಯ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ನಲ್ಲಿ ನಸುಕಿನ ವೇಳೆ ರೌಡಿಶೀಟರ್ ಒಬ್ಬನ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರೌಡಿ ಶೀಟರ್ ಇಂದ್ರಜಿತ್ ಎಂದು ಗುರುತಿಸಲಾಗಿದೆ.

ಮೃತ ರೌಡಿ ಶೀಟರ್ ಇಂದ್ರಜಿತ್ ಮೇಲೆ ಪಾಂಡೇಶ್ವರ ಪೋಲಿಸ್ ಠಾಣೆಯಲ್ಲಿ‌ ರೌಡಿ ಶೀಟ್ ತೆರೆಯಲಾಗಿತ್ತು. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಆಗಮಿಸಿದ್ದು, ಬರ್ಕೆ ಠಾಣಾ ಇನ್ಸ್‌ಪೆಕ್ಟರ್ ಜ್ಯೋತಿರ್ಲಿಂಗ ಪರಿಶೀಲನೆ ನಡೆಸಿದ್ದು, ತನಿಖೆ ‌ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..