ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ

ಮಂಗಳೂರು: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಶಾರ್ಟ್ ಸರ್ಕ್ಯುಟ್ ಉಂಟಾಗಿ ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ನಗರದ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಅಮೃತ ನಗರದ ನಿವಾಸಿ ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯುಟ್​​ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಹುಡಿಯಾಗಿವೆ.

ಸಿಡಿಲಿನ ಸದ್ದಿಗೆ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದ್ದುಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ – Vishwanews24

ಘಟನೆಯಿಂದಾಗಿ ಸಾವಿರಾರು ರೂಪಾಯಿ ನಷ್ಟವಾಗಿದೆ.

Leave a Reply