ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಥವಾ ಕೇಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿಲ್ಲ. ಜನಸಾಮಾನ್ಯರ ಸಮಸ್ಯೆಗಳನ್ನು ನೋಡಿ ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತದೆ ಎಂದು ಸಚಿವ ಯು. ಟಿ. ಖಾದರ್ ಹೇಳಿದರು.

ರವಿವಾರ ನಗರದಲ್ಲಿ ಮಾಧ್ಯಮ ದವರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬರ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿರುವ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ವೈಮಾನಿಕ ಸಮೀಕ್ಷೆ ಮಾಡಿದಾಗ ಸಂಪೂರ್ಣ ಚಿತ್ರಣ ಲಭ್ಯವಾಗುತ್ತದೆ. ಎಲ್ಲೆಲ್ಲಿ ಎಷ್ಟು ಬರ ಪರಿಸ್ಥಿತಿ, ನೀರಿನ ಸ್ಥಿತಿಗತಿ ಹೇಗಿದೆ ಎಂದು ತಿಳಿಯುತ್ತದೆ. ನೆಲದಿಂದ ಹೋದರೆ ಬರ ಪ್ರದೇಶಗಳನ್ನು ಎಷ್ಟು ನೋಡಬಹುದು. ಆದರೂ ಸಿಎಂ ಬೇರೆ ಬೇರೆ ಕಡೆಗಳಿಗೆ ಹೋಗಿ ಪರಿಶೀಲನೆ ಮಾಡಿ ರೈತರಿಗೆ ಸಾಂತ್ವನ ಹೇಳಿದ್ದಾರೆ. ಬಿಜೆಪಿಯವರಿಗೆ ಅಷ್ಟೂ ಮಾಹಿತಿ ಇಲ್ವಾ ಎಂದು ಪ್ರಶ್ನಿಸಿದರು.

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ರೈತರಿಗೆ ಮನ್ನಣೆ ಕೊಟ್ಟು ಬರ ಪರಿಶೀಲನೆಗೆ ಹೋಗಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು. ನಿಮ್ಮ ಸಲಹೆ ಸೂಚನೆ ಏನಿದೆ ಅದನ್ನು ಕೊಡಿ. ಬೇಕಾದರೆ ನೀವೂ ಜತೆಯಲ್ಲಿ ಬನ್ನಿ ನಿಮ್ಮನ್ನೂ ಕರೆದುಕೊಂಡು ಹೋಗುತ್ತೇವೆ ಎಂದರು.

 

Leave a Reply