ಮಂಗಳೂರು ಲೋಕಸಭಾ ಚುನಾವಣೆ :ನಾಮಪತ್ರ ಸಲ್ಲಿಸಿದ `ಬಿಜೆಪಿ’ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಳಿನ್ ಕುಮಾರ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೂರನೇ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ನಳಿನ್ ಕುಮಾರ್ ಕಟೀಲ್ ಪ್ರತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೂ ಮುನ್ನ ಕಟೀಲ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುತ್ತಾರೆ.

ನಳಿನ್ ಕುಮಾರ್ ನಾಮಪತ್ರ ಸಲ್ಲಿಸುವಾಗ ಬಿಜೆಪಿಯ 7 ಶಾಸಕರು ಸಾಥ್ ನೀಡಿದರು.