ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ಗೆ ಶಿಕ್ಷೆ ಪ್ರಕಟ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ಗೆ ಶಿಕ್ಷೆ ಪ್ರಕಟ -Vishwanews24

ಮಂಗಳೂರು: ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2020 ಜನವರಿ ತಿಂಗಳಿನಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ದೋಷಿ ಎಂದಿರುವ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ತೀರ್ಪಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ 1967 ರ ಸೆಕ್ಷನ್ 16 ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10000 ದಂಡ ವಿಫಲವಾದರೆ 6 ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಸ್ಫೋಟಕ ವಸ್ತುಗಳ ಕಾಯ್ದೆ 1908ರ ಸೆಕ್ಷನ್ 4 ರ ಪ್ರಕಾರ 5 ವರ್ಷಗಳ ಕಠಿಣ ಸೆರೆವಾಸ ಮತ್ತು 10000 ರೂ. ದಂಡ, ವಿಫಲವಾದರೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಅನುಭವಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕವನ್ನಿರಿಸಿ ಆರೋಪಿ ಆದಿತ್ಯ ರಾವ್ ನಾಪತ್ತೆಯಾಗಿ ಬಳಿಕ ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ನಂತರ ಹೆಚ್ಚಿನ ವಿಚಾರಣೆಗೆ ಆತನನ್ನು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.

ಆದಿತ್ಯ ರಾವ್‌ ಈ ಹಿಂದೆ ಕೆಲಸ ಕೇಳಿಕೊಂಡು ಹೋದಾಗ, ತನಗೆ ಕೆಲಸ ನೀಡಿರಲಿಲ್ಲ ಎಂಬ ಸಿಟ್ಟಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎರಡು ಬಾರಿ ಹುಸಿ ಬಾಂಬ್‌ ಕರೆ ಮಾಡಿ ಜೈಲು ಸೇರಿದ್ದ.

 

Leave a Reply