ಮಂಗಳೂರು : ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಚು :ಭದ್ರತೆಗೆ ಗೃಹ ಸಚಿವರ ಸೂಚನೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗೃಹಸಚಿವರು ಯು.ಟಿ.ಖಾದರ್ ಗೆ ಭದ್ರತೆ ಹೆಚ್ಚಿಸಲು ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆಯು ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸುವ ಮಾಹಿತಿ ಪಡೆದಿತ್ತು. ಬಳಿಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಗೆ ಭದ್ರತೆ ನೀಡಬೇಕು ಎಂದು ಮಂಗಳೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಯು. ಟಿ. ಖಾದರ್, “ಒಬ್ಬ ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಒಬ್ಬ ಗನ್ ಮ್ಯಾನ್‌ನಿಂದ ರಕ್ಷಣೆ ಹೇಗೆ ಸಾಧ್ಯ?. ನಾನು ವಿವಿಧ ಜಿಲ್ಲೆಗಳಿಗೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಆದ್ದರಿಂದ, ಕಾರ್ಯಕ್ರಮದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು