ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ ಪೊಲೀಸರು, ಲಾಲ್ ಬಾಗ್ ಬಳಿ ಸೋಮವಾರಪೇಟೆಯ ವಿಷ್ಣು ಜಿ.ಕೆ (22 )ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – vishwanews24

ಉರ್ವಾ ಪೊಲೀಸರು ಕೋಡಿಕಲ್ ಶಾಲೆಯ ಬಳಿ ಪ್ರಜ್ವಲ್ ಸಿ.ಯಾನೆ ಪಜ್ಜು (26) ಎಂಬಾತನನ್ನು ಮತ್ತು ಕಾರ್ನಾಡ್ ಗ್ರಾಮದ ಲಿಂಗಪ್ಪಯ್ಯ ಕಾಡು ಬಳಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಧರ್ಮಲಿಂಗ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

Leave a Reply