ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ‌ ದಾನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ‌ ದಾನ 

ಮಂಗಳೂರು: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದು ಕುಟುಂಬಸ್ಥರು ಅಂಗಾಂಗ‌ ದಾನದ ಮೂಲಕ‌ ಸಾರ್ಥಕತೆ ಮೆರೆದಿದ್ದಾರೆ.

ಮೂಡುಶೆ‌ಡ್ಡೆಯ ಗೌರವ್‌ (23) ಚಲಾಯಿಸುತ್ತಿದ್ದ ದ್ಚಿಚಕ್ರ ಬೈಕ್ ಮೂಡುಶೆಡ್ಡೆಯಲ್ಲಿ ಸ್ಕಿಡ್ ಆಗಿ ಬಿದ್ದು ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಪಡ್ಡಂದಡ್ಕ ಜಾಂಡೀಸ್‌ಗೆ ಯುವಕ ಬಲಿ – Vishwanews24

ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿದ್ದ ಗೌರವ್ ಅಂಗಾಗಗಳನ್ನು ಮನೆಯವರ ಇಚ್ಛೆಯಂತೆ ದಾನ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಲಿವರನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಅಳವಡಿಸಲಾಗಿದೆ. ಉಳಿದಂತೆ ಒಂದು ಕಿಡ್ನಿ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಗೆ ಮತ್ತು 2 ಕಣ್ಣಿನ ಕಾರ್ನಿಯಾವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ನ. 3 ರವರೆಗೆ ಸುರತ್ಕಲ್ ಟೋಲ್ ಪ್ಲಾಜಾ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ – Vishwanews24

Leave a Reply