ಮಂಡ್ಯ ನಾಲೆಗೆ ಉರುಳಿದ ಖಾಸಗಿ ಬಸ್ – 20ಕ್ಕೂ ಹೆಚ್ಚು ಪ್ರಯಾಣಿಕರ ಸಾವು..

Featured, ಜಿಲ್ಲೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 20ಕ್ಕೂ ಜನರು ಸಾವನ್ನಪ್ಪಿದ್ದಾರೆ.

ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿದೆ. ಖಾಸಗಿ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಬಸ್‌ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ. 

ನಾಲೆ ಆಳವಾಗಿದ್ದು, ತಡೆ ಗೋಡೆ ಇರಲಿಲ್ಲ. ಬಸ್‌ ಸಂಪೂರ್ಣವಾಗಿ ಮುಳುಗಿದೆ. ಬಸ್‌ನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎನ್ನ‌ಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.