ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ – ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24

Featured, ರಾಷ್ಟ್ರ ನ್ಯೂಸ್

ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ – ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ :‌ ಸಚಿವ ಸುಧಾಕರ್ – Vishwanews24

ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.

World Famous Lover Movie, ಟ್ರೋಲ್‌ ಪೇಜ್‌ಗಳ ನಿದ್ದೆಕೆಡಿಸಿದ ತೆಲುಗು ನಟ ವಿಜಯ್  ದೇವರಕೊಂಡ ! - vijay devarakonda speaks about trolls at raashi khanna starrer  world famous lover movie promotion time - Vijaya Karnataka

Leave a Reply