ಮದುವೆಯಾಗಲು ಹೆಣ್ಣು ಸಿಗದ ಕಾರಣ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ – vishwanews24
ಮದುವೆಯಾಗಲು ಹೆಣ್ಣು ಸಿಗದ ಕಾರಣ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ
ವಿಜಯನಗರ : ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ.
ಯುವಕನ ತಂದೆ ಅರೆ ಹುಚ್ಚನ ಹಾಗೆ ವರ್ತನೆ ಮಾಡುತ್ತಾನೆಂದು ಕನ್ಯೆ ಕೊಡಲು ನಿರಾಕರಿಸುತ್ತಿದ್ದರಂತೆ. ಇದರಿಂದ ಮನನೊಂದಿದ್ದ ಯುವಕ ಕುಡಿಯಲು ಆರಂಭಿಸಿದ್ದಾನೆ. ನನಗೆ ಮದುವೆ ಅಗಲ್ಲ ಎಂದು ಮಧುಸೂದನ್ ಜನವರಿ 5ರಂದು ವಿಷ ಸೇವಿಸಿದ್ದಾನೆ. ಕೂಡಲೆ ಮಧುಸೂಧನ್ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧುಸೂಧನ್ ಮೃತಪಟ್ಟಿದ್ದಾನೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
