ಮರಗಳನ್ನು ಕಡಿಯುವುದನ್ನು ನಿಲ್ಲಿಸಿ : ಹೆಚ್.ಡಿ.ಕುಮಾರಸ್ವಾಮಿ -Vishwanews24
ಮಡಿಕೇರಿ: ಖಾಸಗಿ ವ್ಯಕ್ತಿಯೊಬ್ಬರು ನಗರದ ಹೊರಭಾಗದಲ್ಲಿರುವ ಕೆ.ನಿಡುಗಡೆ ಗ್ರಾಮದಲ್ಲಿ ನೂರಾರು ಮರಗಳನ್ನು ಕಡಿದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆದೇಶವೊಂದನ್ನು ಹೊರಡಿಸಿ ಮರಗಳನ್ನು ಕಡಿಯುವುದನ್ನು ತಕ್ಷಣ ನಿಲ್ಲಿಸಬೇಕೆಂದು ಸೂಚನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ತಿಳಿಸಿದ್ದಾರೆ.
ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ ಪೈಕಿ 30 ಏಕರೆಯಲ್ಲಿದ್ದ 890 ಮರಗಳನ್ನು ಹನನ ಮಾಡಲಾಗಿದೆ ಎಂದು ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಸರ್ಕಾರದ ಗಮನವನ್ನೂ ಸೆಳೆದಿದ್ದರು.
ರೆಸಾರ್ಟ್ ನಿರ್ಮಾಣಕ್ಕಾಗಿ ಈ ಮರಗಳನ್ನು ಕಡಿಯಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿತ್ತು.
