ಮಲೆನಾಡಿನ ಹಸಿರು ಸಿರಿಗಳ ನಡುವೆ ಸ್ಥಾಪಿತವಾದ ಇತಿಹಾಸ ಪ್ರಸಿದ್ಧ ಅನ್ನದಾತೆ ಆದಿಶಕ್ತ್ಯಾತ್ಮಕ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಅಮ್ಮ – Vishwanews24

Featured, ರಾಜ್ಯ ನ್ಯೂಸ್, ವಿಶೇಷ ಲೇಖನಗಳು

ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದು ಹೊರನಾಡು ಅನ್ನಪೂರ್ಣೇಶ್ವರಿ ದೇವಿ. ಇದು ಕಲಸಾದಿಂದ ಸುಮಾರು 10 ಕಿ.ಮೀ ದೂರದಲ್ಲಿದೆ ಮತ್ತು ದೇವಿಯ ದೇವಸ್ಥಾನವನ್ನು ಹೊಂದಿದೆ. ಶ್ರೀ ಅನ್ನಪೂರ್ಣೇಶ್ವರಿ. ಈ ಸ್ಥಳವು ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತದೆ.

ಹೊರ್ನಾಡು ಎಂದೂ ಕರೆಯಲ್ಪಡುವ ಹೊರ್ನಾಡು, ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಹಿಂದೂ ಪವಿತ್ರ ಸ್ಥಳ ಮತ್ತು ಪಂಚಾಯತ್ ಗ್ರಾಮವಾಗಿದೆ. ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವತೆ ಅನ್ನಪೂರ್ಣೇಶ್ವರಿಯವರು. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟಿತು; ಅನ್ನಪೂರ್ಣೇಶ್ವರಿಯ ದೇವತೆಯ ಹೊಸ ದೇವತೆ 1973 ರಲ್ಲಿ ದೇವಸ್ಥಾನದಲ್ಲಿ ಪವಿತ್ರಗೊಳಿಸಲ್ಪಟ್ಟಿತು. ಹಾರ್ನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ.

ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ  ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.

ಅನ್ನಪೂರ್ಣೇಶ್ವರಿಯ ಮಹಿಮೆ
ಯಾವುದೇ ಸಮಯದಲ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡಿದರೂ, ಊಟ ದೊರೆಯುವಂತೆ ಮಾಡುವುದು ಈ ಅನ್ನಪೂರ್ಣೇಶ್ವರಿಯ ಮಹಿಮೆ. ಒಮ್ಮೆ ಪಾರ್ವತಿ ಪರಮಶಿವನೊಂದಿಗೆ ಪಗಡೆ ಆಡುವಾಗ ಇಬ್ಬರ ನಡುವೆ ಜಗಳವಾಯಿತಂತೆ. ಆಗ ಸಿಟ್ಟಲ್ಲಿ ಶಿವ ಭೂಮಿ ಮೇಲೆ ಎಲ್ಲವೂ ಮಾಯವಾಗಬೇಕೆನ್ನುತ್ತಾನೆ. ಆದರೆ, ಅನ್ನ ಎಲ್ಲರಿಗೂ ಸಿಗಬೇಕೆಂದ ಪಾರ್ವತಿ, ಈ ಹೊರನಾಡಿನಲ್ಲಿ ಬಂದು ನೆಲೆಸುತ್ತಾಳೆ. ಎಂದಿಗೂ ಅನ್ನ ಅಕ್ಷಯವಾಗುವಂತೆ ನೋಡಿಕೊಳ್ಳುವುದು ಅನ್ನಪೂರ್ಣೇಶ್ವರ ಅವತಾರವಾದ ಪಾರ್ವತಿ ವಿಶೇಷ..

ಬ್ರಹ್ಮನ ತಲೆಯನ್ನು ಶಿವನ್ನೊಮ್ಮೆ ಕಡಿಯುತ್ತಾನೆ. ಬ್ರಹ್ಮನ ಬುರುಡೆ ಶಿವನ ಕೈಗೆ ಅಂಟಿದ್ದು ಬಿಡುವುದಿಲ್ಲ. ಅದು ತುಂಬುವಷ್ಟು ದವಸ ಧಾನ್ಯಗಳನ್ನು ತುಂಬ ಬೇಕಿತ್ತು. ಅದೂ ಎಲ್ಲಿಯೂ ಸಾಧ್ಯವಾಗದಿದ್ದಾಗ, ಅನ್ನಪೂರ್ಣೇಶ್ವರಿ ಎದುರು ತಲೆ ಬಾಗುತ್ತಾನೆ ಶಿವ. ಆಗ ಬುರುಡೆ ತುಂಬಿ, ಶಿವನ ಕೈಯಿಂದ ಬುರುಡೆ ಕೆಳಗೆ ಬೀಳುತ್ತದೆ ಎಂಬ ಪುರಾಣ ಕಥೆಯೊಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನಲ್ಲಿ ಬಂದು ನೆಲೆಸಿದ ಅನ್ನಪೂರ್ಣೇಶ್ವರಿ ಯಾವತ್ತೂ ಹಸಿದು ಬಂದವರನ್ನು ಹಾಗೇ ಕಳುಹಿಸಿದ್ದೇ ಇಲ್ಲ.

ಅಕ್ಷಯ ತೃತೀಯದಂದು 1973ರಲ್ಲಿ ಈ ದೇವಸ್ಥಾನದ ಮರು ಪ್ರತಿಷ್ಠಾಪನೆಯಾಗಿದೆ. ಅದಕ್ಕೂ ಮುಂಚೆ 400 ವರ್ಷಗಳ ಇತಿಹಾಸವಿರುವ ಈ ದೇವಸ್ಥಾನವು ಚಿಕ್ಕ ಗುಡಿಯಾಗಿತ್ತು. ವಾಸ್ತು ಪ್ರಕಾರ ಈ ದೇವಸ್ಥಾವನ್ನು ಜೀರ್ಣೋದ್ಧಾರ ಮಾಡಿದ್ದು ವೆಂಕಟಸುಬ್ಬ ಜೋಶಿಯವರು.

ಕುಳಿತ ಸ್ಥಿತಿಯಲ್ಲಿ ದೇವಿ ಆಶೀರ್ವದಿಸುತ್ತಿರುವುದು ಸಾಮಾನ್ಯವಾಗಿ ಎಲ್ಲಾ ದೇವಸ್ಥಾನಗಳಲ್ಲಿದ್ದರೆ, ಇಲ್ಲಿ ನಿಂತು ಕೊಂಡ ದೇವಿಯನ್ನು ಕಾಣಬಹುದು.  ಅಡಿಯಿಂದ ಮುಡೀಯವರೆಗೂ ಈ ದೇವಿಯನ್ನು ಚಿನ್ನದಲ್ಲಿಯೇ ಮುಚ್ಚಿರುತ್ತಾರೆ.ಅಕ್ಷಯ ತೃತೀಯವನ್ನು ಅನ್ನಪೂರ್ಣೆ ಜನ್ಮದಿನ ವೆನ್ನಲಾಗುತ್ತದೆ. ಸಾಮಾನ್ಯವಾಗಿ ಫೆಬ್ರವರಿಯಲ್ಲಿ 5 ದಿನಗಳ ಕಾಲ ಈ ದೇವಿಯ ರಥೋತ್ಸವ ನಡೆಯುತ್ತದೆ. ವರಾತ್ರಿಯಲ್ಲಿ ಅದ್ಧೂರಿ ಪೂಜೆ ನೆರವೇರುತ್ತದೆ.

ನಮ್ಮ ಸನಾತನ ಧರ್ಮದ ಪ್ರಕಾರ ಆಹಾರಕ್ಕೆ (ಅನ್ನಕ್ಕೆ) ತನ್ನದೇ ಆದ ಪ್ರಾಮುಖ್ಯತೆ ಇದೆ. ಜೀವಿಗಳು ಬದುಕಲು ಮುಖ್ಯವಾಗಿ ಬೇಕಾಗಿರುವುದೇ ಆಹಾರವಾಗಿದೆ. ನಮ್ಮ ಹಿಂದೂ ಧರ್ಮದಲ್ಲಿ ಪ್ರತಿಯೊಂದು ಜೀವಿಯಲ್ಲಿಯೂ, ವಸ್ತುವಿನಲ್ಲಿಯೂ ದೈವತ್ವವನ್ನು ಕಾಣವುದು ಸರ್ವೆ ಸಾಮಾನ್ಯ. ಅನ್ನವನ್ನು ನೀಡುವ ತಾಯಿಯಾದ ಅನ್ನಪೂರ್ಣೆಯನ್ನು ಪ್ರತಿಯೊಬ್ಬರು ಭಕ್ತಿಯಿಂದ ಆರಾಧಿಸುತ್ತಾರೆ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ  ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ಮಹಾ ಮಂಗಳಾರತಿ ನಡೆಯೋ ಸಮಯ:ದಿನದಲ್ಲಿ ಮೂರು ಬಾರಿ ಮಹಾ ಮಂಗಳಾರತಿ ನಡೆಯುತ್ತದೆ – 9.00 AM, 2.00 PM ಹಾಗೂ  9.00 PM.

ದೇವಾಲಯದ ಸಮಯ: 

ದರ್ಶನ ವೇಳೆ…

ಬೆಳಗ್ಗೆ – 6.30am – 9.00am

ಮಧ್ಯಾಹ್ನ – 11.00am – 2.00pm

ರಾತ್ರಿ – 7.00pm – 9.30pm

ಹೊರನಾಡು ಮಲ್ನಾಡದ ಮಧ್ಯೆ ಮಂಗಳೂರಿನಿಂದ 126 ಕಿ.ಮೀ ದೂರದಲ್ಲಿದೆ ಮತ್ತು ಬೆಂಗಳೂರಿನಿಂದ 316 ಕಿಮೀ ದೂರದಲ್ಲಿದೆ. ಶೃಂಗೇರಿಯಿಂದ 75 ಕಿಮೀ ದೂರವಿದೆ. ಬೆಂಗಳೂರಿನಿಂದ ಹಾರನಾಡಿಗೆ ನೇರ ಬಸ್ಸುಗಳು ಪ್ರತಿದಿನವೂ ಚಲಿಸುತ್ತವೆ. ಬಸ್ ಸೇವೆಗಳನ್ನು ಕೆಎಸ್ಆರ್ಟಿಸಿ ಮತ್ತು ಖಾಸಗಿ ಕಂಪನಿಗಳು ಒದಗಿಸುತ್ತವೆ. ಹತ್ತಿರದ ವಿಮಾನ ನಿಲ್ದಾಣ ಮಂಗಳೂರಿನಲ್ಲಿರುವ ಬಾಜ್ಪೆ ವಿಮಾನ ನಿಲ್ದಾಣ ಎಂದು ಕರೆಯಲ್ಪಡುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ. ಮಂಗಳೂರಿನ ಮೂಲಕ ಕಾರ್ಕಳ ಮತ್ತು ಕಲಸಾ ಮೂಲಕ ರಸ್ತೆಯ ಮೂಲಕ ತಲುಪಬಹುದು.

ಅತಿಥಿ ಗೃಹಗಳು

ದೇವಸ್ಥಾನದ ಸಿಬ್ಬಂದಿ ಅತ್ಯಂತ ಸ್ನೇಹಪರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.

ಪ್ರಸಾದ 

ಅವಲಕ್ಕಿ, ಮಜ್ಜಿಗೆ, ಕಾಫಿ ಬೆಳಗಿನ ಉಪಾಹಾರಕ್ಕಾದರೆ, ಮಧ್ಯಾಹ್ನದ ಭೋಜನಕ್ಕೆ ಅನ್ನ, ಸಾರು, ಚಿತ್ರಾನ್ನ ಹಾಗೂ ಪಾಯಸ. ಊಟದ ಕೊನೆಗೆ ಹೊಟ್ಟೆ ತಂಪೆನಿಸಲು ಮಜ್ಜಿಗೆ. ರಾತ್ರಿಯೂ ಸ್ವಾದಿಷ್ಟ ಭೋಜನ. ಅಡುಗೆ ಕೋಣೆ ಆಧುನಿಕ ಸೌಲಭ್ಯಗಳಿಂದ ಸಜ್ಜುಗೊಂಡಿದೆ.

ಹೊರನಾಡು ಅನ್ನಪೂರ್ಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆ