ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು  ವ್ಯಕ್ತಿ ನಾಪತ್ತೆ  – Vishwanews24

Featured, ಉಡುಪಿ

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು  ವ್ಯಕ್ತಿ ನಾಪತ್ತೆ 

ಮಲ್ಪೆ:  ಮನೆಯಿಂದ ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೇಜಾರು ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಡ (44) ಕಾಣೆಯಾದ ವ್ಯಕ್ತಿ. ಅವರ ಸಂಬಂಧಿ ಪ್ರಕಾಶ್ ನೀಡಿದ ದೂರು ನೀಡಿದ್ದಾರೆ.

ಅಕ್ಟೋಬರ್ 18 ರಂದು ಪ್ರವೀಣ್ ಮನೆ ಬಿಟ್ಟು ತೆರಳಿದ್ದು ಬಳಿಕ ಹಿಂತಿರುಗಲಿಲ್ಲ. ಆರು ವರ್ಷಗಳ ಹಿಂದೆ ಪ್ರವೀಣ್ ಅವರು ಸಂಧ್ಯಾಳನ್ನು ಮದುವೆಯಾಗಿದ್ದು, ದಂಪತಿ ನಡುವೆ ಕೌಟುಂಬಿಕ ಮನಸ್ತಾಪವಿದ್ದು, ಅವರ ಪತ್ನಿ ಮತ್ತು ಮಗು ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಪ್ರವೀಣ್ ತನ್ನ ಸಂಬಂಧಿ ಪ್ರಕಾಶ್ ಮನೆಯಲ್ಲಿ ಊಟ, ತಿಂಡಿ ಮಾಡುತ್ತಿದ್ದರು.

ಕಾರ್ಕಳ: ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತ ದೇಹ ಪತ್ತೆ – Vishwanews24

ಪ್ರವೀಣ್ ಮನೆಗೆ ಬೀಗ ಹಾಕಿ ಕೀಯನ್ನು ಹೊರಗೆ ಇಟ್ಟಿರುವ ಬಗ್ಗೆ ಪ್ರವೀಣ್ ಪಕ್ಕದ ಮನೆಯವರು ಪ್ರಕಾಶ್ ಗೆ ಮಾಹಿತಿ ನೀಡಿದ್ದಾರೆ. ಸಂಬಂಧಿಕರು ಮನೆ ತೆರೆದು ನೋಡಿದಾಗ ನಾಪತ್ತೆಯಾಗಿದ್ದ ಪ್ರವೀಣ್ ತನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದ ಪತ್ರದಲ್ಲಿತ್ತು.

ಪ್ರವೀಣ್ 5.6 ಅಡಿ ಎತ್ತರ ಮತ್ತು ಗೋಧಿ ಮೈಬಣ್ಣ ಹೊಂದಿದ್ದಾನೆ. ಪ್ರವೀಣ್ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಸಾರ್ವಜನಿಕರು ಮಲ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

Leave a Reply