ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸುಧಾರಣೆ : ಆಸ್ಪತ್ರೆಯಿಂದ ಬಿಡುಗಡೆ – vishwanews24
ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಸುಧಾರಣೆ : ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಅವರ ಹೃದಯಕ್ಕೆ ಪೇಸ್ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅದು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಿಕಿತ್ಸೆ ಬಳಿಕ ಅವರು ಗುಣಮುಖರಾಗಿ ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಕಟಣೆಯ ಪ್ರಕಾರ, ಖರ್ಗೆ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. “ಖರ್ಗೆ ಜೀ ಆರೋಗ್ಯವಾಗಿದ್ದಾರೆ. ಎಲ್ಲರ ಶುಭಾಶಯಗಳು ಹಾಗೂ ಬೆಂಬಲಕ್ಕೆ ಧನ್ಯವಾದಗಳು. ಅವರು ಶೀಘ್ರದಲ್ಲೇ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ,” ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ : ಹೆಚ್ಡಿಡಿ ಘೋಷಣೆ – vishwanews24
