ಮಳೆಯ ಅಬ್ಬರ  – ಕಾಪು ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ – vishwanews24

Featured, ಉಡುಪಿ

 ಮಳೆಯ ಅಬ್ಬರ  – ಕಾಪು ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ

ಉಡುಪಿ: ಜಿಲ್ಲಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಇಂದು ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಶನಿವಾರ ಬೆಳಗ್ಗೆ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ಶುಕ್ರವಾರದ ಬಿರುಸಿನ ಮಳೆಯಿಂದಾಗಿ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಅಮಾಸೆಬೈಲು ಬಳ್ಮನೆ ಭಾಗದಲ್ಲೂ ಮನೆಗಳಿಗೆ ಹಾನಿಯಾಗಿದೆ.

ನೇಜಾರು ಹತ್ಯೆ ಪ್ರಕರಣ : ಸಾಕ್ಷಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ – vishwanews24

ಕಾಪು ತಾಲೂಕಿನಲ್ಲಿ ಗಾಳಿ, ಮಳೆ ಮತ್ತು ನೆರೆಗೆ ಸಿಲುಕಿದ 35 ಮಂದಿಯನ್ನು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌. ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಟಪಾಡಿ ಮೂಡಬೆಟ್ಟು, ಏಣಗುಡ್ಡೆ, ನಡ್ಪಾಲು ಪಾದೆಬೆಟ್ಟು, ಪಡುಬಿದ್ರಿ ಕಲ್ಲಟ್ಟೆ ಮತ್ತು ಹೆಜಮಾಡಿ ಶಿವನಗರ ಪರಿಸರದ ಸಂತ್ರಸ್ತರನ್ನು ತಾಲೂಕು ಆಡಳಿತ, ಗೃಹರಕ್ಷಕ ದಳ ಮತ್ತು ಸ್ಥಳೀಯ ಗ್ರಾಮ ಪಂಚಾಯತ್‌ಗಳ ನೇತೃತ್ವದಲ್ಲಿ ರಕ್ಷಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಡಳಿತ ಕೇಂದ್ರದ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ 0820-2551444 ಅನ್ನು ಸಂಪರ್ಕಿಸುವಂತೆ ತಹಶೀಲ್ದಾರ್‌ ತಿಳಿಸಿದ್ದಾರೆ.

ರಾಜ್ಯಾದ್ಯಂತ ಡೆಂಗ್ಯೂ ಹಾವಳಿ : ಮತ್ತೋರ್ವ ಯುವತಿ ಬಲಿ – vishwanews24

Leave a Reply