ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ; ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ  – vishwanews24

Featured, ರಾಷ್ಟ್ರ ನ್ಯೂಸ್

ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ; ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ 

ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.

ವೀಕ್ಷಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್ ರೂಪಾಣಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.

ಕುಂದಾಪುರ: ಯುವಕ ನಾಪತ್ತೆ – vishwanews24

ಅಭಿಪ್ರಾಯ ಸಂಗ್ರಹದ ಬಳಿಕ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ನಾಳೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ.

ಏಕನಾಥ್ ಶಿಂಧೆ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಡಿಸಿಎಂ ಹುದ್ದೆಗೆ ಬಿಜೆಪಿ ನಾಯಕರು ಮನವೊಲಿಸಿದ್ದಾರೆ. ದೇವೇಂದ್ರ ಪಡ್ನವೀಸ್ ಸೇರಿದಂತೆ ಹಲವು ಪ್ರಮುಖರಿಂದ ಮನವೊಲಿಕೆ ಕಾರ್ಯ ಯಶಸ್ವಿಯಾಗಿದೆ.

ಸುದೀರ್ಘ ಸಭೆಗಳ ಬಳಿಕ ಡಿಸಿಎಂ ಸ್ಥಾನಕ್ಕೆ ಏಕನಾಥ್‌ ಶಿಂಧೆ ಒಪ್ಪಿಕೊಂಡಿದ್ದಾರೆ. ಹೀಗಾಗಿ, ದೇವೇಂದ್ರ ಪಡ್ನವೀಸ್ ಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಕುಂದಾಪುರ: ಯುವಕ ನಾಪತ್ತೆ – vishwanews24

 

Leave a Reply