ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24

Featured, ರಾಜ್ಯ ನ್ಯೂಸ್

ಮಹಾರಾಷ್ಟ್ರಕ್ಕೆ KSRTC ಬಸ್ ಸೇವೆ ಸ್ಥಗಿತ – Vishwanews24

ಕಲಬುರಗಿ: ಮಹಾರಾಷ್ಟ್ರದಲ್ಲಿ ಎಮ್‌ಇಎಸ್ ಪುಂಡರ ಅಟ್ಟಹಾಸ‌ ಮುಂದುವರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸೇವೆ‌ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ಸೇರಿದಂತೆ KSRTC ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು‌ ನಗರದಲ್ಲಿ ಕೆಕೆಆರ್‌ಟಿಸಿ ಚಿಫ್ ಟ್ರಾಫಿಕ್ ಮ್ಯಾನೇಜರ್ ಸಂತೋಷ ಕುಮಾರ್ ಹೇಳಿಕೆ ನೀಡಿದ್ದಾರೆ.

ಎಮ್‌ಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿಯ ಮೂರು ಬಸ್‌ಗಳ ಮೇಲೆ ದಾಳಿ ಮಾಡಿದ್ದಾರೆ. ನಿತ್ಯ ಕೆಕೆಆರ್‌ಟಿಸಿ ವತಿಯಿಂದ 300 ಬಸ್‌ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡುತ್ತಿದ್ದವು, ಸಾರಿಗೆ ಸಂಸ್ಥೆ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಸೇವೆ ರದ್ದುಗೊಳಿಸಲಾಗಿದೆ ಹಾಗೂ ಪರಿಸ್ಥಿತಿ ತಿಳಿಗೊಂಡ ನಂತರ ಸಾರಿಗೆ ಸಂಚಾರ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

23-12-2021 : ಇಂದಿನ ದಿನ ಭವಿಷ್ಯ -Vishwanews24