ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲ ; ಇದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ ಆಕ್ರೋಶ – Vishwanews24
ಮಹಾರಾಷ್ಟ್ರದಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲ ; ಇದು ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ ಆಕ್ರೋಶ
ಮೈಸೂರು : ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆ ತಿದ್ದುಪಡಿ ಮಾಡಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ.
ಅನ್ನದಾತರೇ, ನೀವು 1 ಎಕರೆ ಪ್ರದೇಶದಲ್ಲಿ ಈ ಬೆಳೆ ಬೆಳೆದ್ರೆ, 40 ದಿನಗಳಲ್ಲಿ 120 ಕ್ವಿಂಟಾಲ್ ಇಳುವರಿ, ಕೆಜಿಗೆ ₹80-120 ದರದಲ್ಲಿ ಮಾರಾಟ ಮಾಡ್ಬೋದು.!
ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ ಮೊದಲ ಆಪರೇಷನ್ ಕಮಲ ಮಾಡಿದರು. ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.
ಭಗತ್ ಸಿಂಗ್, ನಾರಾಯಣಗುರು ಪಾಠ ತೆಗೆದುಹಾಕಿಲ್ಲ : ಸಚಿವ ಆರ್. ಅಶೋಕ್ ಸ್ಪಷ್ಟನೆ – Vishwanews24
