ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಕ್ಷಮಹಾರಾಷ್ಟ್ರದಲ್ಲಿ ರಾಜ್ಯಪಾಲರು ಈಗ ತಮ್ಮ ದಾಳವನ್ನು ಉರುಳಿಸಿದ್ದು ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಾಗತ್ ಸಿಂಗ್ ಕೊಶ್ಯಾರಿ ಕೇಂದ್ರಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಸರ್ಕಾರ ರಚಿಸಲು ಇಂದು ರಾತ್ರಿ 8-30ರವರೆಗೆ ಸಮಯ ನೀಡಿದ ನಂತರ ಅಗತ್ಯ ಸಂಖ್ಯಾಬಲವನ್ನು ಒಗ್ಗೂಡಿಸಲು ಎನ್ ಸಿಸಿ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈ ಸಂಬಂಧ ವರದಿಯನ್ನು ಸಲ್ಲಿಸಿದ್ದಾರೆ.

ಎನ್‍ಸಿಪಿ ಈ ಆಹ್ವಾನವನ್ನು ಸ್ವೀಕರಿಸಿದ್ದರು ಇದೂವರೆಗೂ ಸರ್ಕಾರ ರಚನೆ ಸಂಬಂಧ ಹಕ್ಕು ಮಂಡನೆ ಮಾಡದ ಪರಿಣಾಮ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ಕೇಂದ್ರ ಕ್ಯಾಬಿನೆಟ್ ರಾಜ್ಯಪಾಲರ ವರದಿಯನ್ನು ಪರಿಶೀಲಿಸಿ ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿ