ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ – 14 ಕೋಟಿ ಲಾಭ : ಯಶ್ಪಾಲ್ ಎ. ಸುವರ್ಣ – Vishwanews24
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ – 14 ಕೋಟಿ ಲಾಭ : ಯಶ್ಪಾಲ್ ಎ. ಸುವರ್ಣ
ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ೨೦೨೧-೨೨ನೇ ಸಾಲಿನಲ್ಲಿ ರೂ. ೬೪೧.೨೨ ಕೋಟಿ ವ್ಯವಹಾರ ನಡೆಸಿ ರೂ. ೧೪ ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ ೨೦೨೧-೨೨ನೇ ಸಾಲಿನಲ್ಲಿ ೩೬೮ ಕೋಟಿ ಠೇವಣಿ, ೨೭೩ ಕೋಟಿ ಸಾಲ ಮತ್ತು ಮುಂಗಡದೊ0ದಿಗೆ, ರೂ. ೧೯.೩೪ ಕೋಟಿ ಪಾಲು ಬಂಡವಾಳದೊAದಿಗೆ, ಹಣಕಾಸು ವರ್ಷದಲ್ಲಿ ಠೇವಣಿ ಸಂಗ್ರಹಣೆಯಲ್ಲಿ ೫೧%, ಸಾಲ ಮತ್ತು ಮುಂಗಡ ೫೪%, ಪಾಲು ಬಂಡವಾಳ ೭೩% ಪ್ರಗತಿ ಸಾಧಿಸಿದೆ.
ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ೧೮% ಡಿವಿಡೆಂಡ್ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿಯನ್ನು ಪಡೆದಿದೆ.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಾದ ಕುಮುಟಾ, ಹೊನ್ನಾವರ, ಭಟ್ಕಳ ಹಾಗೂ ಕಾರವಾರ ತಾಲೂಕುಗಳಿಗೆ ವಿಸ್ತರಿಸಲಾಗಿದೆ.
ಬ್ಯಾಂಕಿನ ಮಲ್ಪೆ, ಕುಂದಾಪುರ, ಮಂಗಳೂರು, ಸುರತ್ಕಲ್ ಶಾಖೆ ಹಾಗೂ ಆಡಳಿತ ಕಚೇರಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಖೆಗಳಲ್ಲಿ ಆಧುನಿಕ ಬ್ಯಾಂಕಿ0ಗ್ ವ್ಯವಸ್ಥೆಯೊಂದಿಗೆ ಗ್ರಾಹಕರಿಗೆ ಆರ್.ಟಿ.ಜಿ.ಎಸ್., ನೆಫ್ಟ್ ಸೌಲಭ್ಯವನ್ನು ನೀಡುತ್ತಿದೆ. ಸೇಫ್ ಡೆಪಾಸಿಟ್ ಲಾಕರ್, ಇ- ಸ್ಟಾಂಪಿಂಗ್, ಎಸ್ಎಮ್ಎಸ್ ಬ್ಯಾಂಕಿ0ಗ್, ಎಬಿಕ್ಸ್ ಕ್ಯಾಶ್ (ವೆಸ್ಟರ್ನ್ ಯೂನಿಯನ್), ಎಚ್ಡಿಎಫ್ಸಿ ಬ್ಯಾಂಕಿನ ಒಡಂಬಡಿಕೆಯೊAದಿಗೆ ಎಟಿಎಂ ಸೌಲಭ್ಯ, ಕ್ಯೂಆರ್ ಕೋಡ್ ಸೌಲಭ್ಯ, ಮೊಬೈಲ್ ಬ್ಯಾಂಕಿ0ಗ್ ಸೇವೆಗಳನ್ನು ಅಳವಡಿಕೊಳ್ಳಲಾಗಿದೆ.
ಆಝಾನ್ ವಿವಾದ : ಸರ್ಕಾರ ಯಾವುದೇ ಹೊಸ ಆದೇಶ ಮಾಡಿಲ್ಲ , ಹೈಕೋರ್ಟ್ ಆದೇಶ ಪಾಲನೆ ಮಾಡಲಾಗುವುದು : ಸಿಎಂ
ಮಹಾಲಕ್ಷ್ಮೀ ಬ್ಯಾಂಕ್, ವಿದ್ಯಾರ್ಥಿಗಳಿಗಾಗಿ ಮಹಾಲಕ್ಷ್ಮೀ ವಿದ್ಯಾಸಿರಿ ಝೀರೋ ಬ್ಯಾಲೆನ್ಸ್ ಉಳಿತಾಯ ಖಾತೆ ಯೋಜನೆ ಆರಂಭಿಸಿದ್ದು, ಠೇವಣಿಗಳಿಗೆ ಶೇ. ೦.೪೦% ಅಧಿಕ ಬಡ್ಡಿ, ಸಂಘ ಸಂಸ್ಥೆಗಳ ರೂ. ೨೫ ಲಕ್ಷ ಮೇಲ್ಪಟ್ಟ ಠೇವಣಿಗಳಿಗೆ (ಒಂದು ವರ್ಷ ಮೇಲ್ಪಟ್ಟ ಅವಧಿ) ಶೇ. ೮.೫% ಬಡ್ಡಿ ನೀಡಲಾಗುತ್ತಿದ್ದು, ಆಜಾದಿ ಕಾ ಅಮೃತ್ ಮಹೋತ್ಸವದ ವರ್ಷಾಚರಣೆಯ ಅಂಗವಾಗಿ ವೈಯಕ್ತಿಕ ಉಳಿತಾಯ ಖಾತೆಯಲ್ಲಿ ರೂ. ೨ ಲಕ್ಷ ಮೇಲ್ಪಟ್ಟ ಠೇವಣಿಗಳಿಗೆ ಹೆಚ್ಚುವರಿ ಶೇ. ೦.೫೦ ಬಡ್ಡಿ ಹಾಗೂ ಸಹಕಾರಿ ಸಂಘ ಮತ್ತು ಸಂಘ ಸಂಸ್ಥೆಗಳ ಉಳಿತಾಯ ಖಾತೆಯಲ್ಲಿ ರೂ. ೫ ಲಕ್ಷ ಮೇಲ್ಪಟ್ಟ ಠೇವಣಿಗೆ ಶೇ. ೧.೦ ಬಡ್ಡಿ ನೀಡಲಾಗುತ್ತಿದ್ದು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಹಕರಿಸಿದ ಸರ್ವರಿಗೂ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಬ್ಯಾಂಕಿನ ಪ್ರಗತಿಗೆ ಸರ್ವರ ಸಲಹೆ ಸಹಕಾರವನ್ನು ಯಾಚಿಸುವುದಾಗಿ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ವರ್ಷ ಎಂದು ಧ್ವನಿ ವರ್ಧಕ ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ : ಸಿದ್ದರಾಮಯ್ಯ – Vishwanews24
