ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ – vishwanews24

Featured, ರಾಷ್ಟ್ರ ನ್ಯೂಸ್

ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ

ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌  ಪುತ್ರಿ ಐಶ್ವರ್ಯ  ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.

ಕುಂಭಮೇಳದಲ್ಲಿ  ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.

ತಂದೆ ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋಗುವ ಮುನ್ನ ಐಶ್ವರ್ಯ ಭೇಟಿ ಕೊಟ್ಟಿದ್ದಾರೆ. ಇದೇ ಫೆ.9, 10 ರಂದು ಕುಂಭಮೇಳಕ್ಕೆ ತೆರಳುವುದಾಗಿ ಡಿಕೆಶಿ ಹೇಳಿದ್ದರು.

ಮಂಗಳೂರು:  ಫೆ.8 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ – vishwanews24

ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.

Leave a Reply