ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ -Vishwanews24
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅರುಣ್ ಜೇಟ್ಲಿ ಅವರಿಗೆ ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿಲ್ಲ.

ಜಾಹಿರಾತು
ಶ್ವಾಸಕೋಶದಲ್ಲಿ ನೀರು ತುಂಬಿದ್ದು, ಈ ಕಾರಣದಿಂದ ಅವರಿಗೆ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿದೆ. ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ. ಜೇಟ್ಲಿ ಬಹಳ ವರ್ಷಗಳಿಂದ ಮಧುಮೇಹ ಪೀಡಿತರಾಗಿದ್ದು, ಅವರಿಗೆ ಕಿಡ್ನಿ ಕಸಿಯನ್ನು ಸಹ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಸಾಫ್ಟ್ ಟಿಸ್ಯೂ ಕ್ಯಾನ್ಸರ್ ಇದೆ ಎಂಬುದು ಪತ್ತೆಯಾಗಿತ್ತು. ಸ್ಥೂಲಕಾಯದಿಂದ ಮುಕ್ತಿ ಪಡೆಯಲು ಅವರು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಸಹ ಒಳಗಾಗಿದ್ದರು.
