ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

Featured, ರಾಷ್ಟ್ರ ನ್ಯೂಸ್

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ

ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ ಕಿತ್ತೆಸೆಯುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋಲು ಅನುಭವಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಕಾಳಿಘಾಟ್ ನ ತಮ್ಮ ನಿವಾಸದಲ್ಲಿ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ದೆಹಲಿಯಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗುವುದು” ಎಂದು ಹೇಳಿದರು. ಇತ್ತೀಚೆಗೆ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗೆದ್ದು 15 ವರ್ಷಗಳ ಟಿಎಂಸಿ ಆಳ್ವಿಕೆಯನ್ನು ಬಿಜೆಪಿ ಕೊನೆಗೊಳಿಸಿತ್ತು. ಟಿಎಂಸಿ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು.

ಚುನಾವಣಾ ಹಿನ್ನಡೆಯ ಹೊರತಾಗಿಯೂ ಪಕ್ಷ ಬಿಜೆಪಿ ವಿರುದ್ಧ ರಾಜಕೀಯ ಹೋರಾಟ ಮುಂದುವರಿಸುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನುಡಿದರು. “ಅವರು ಏನು ಬೇಕೋ ಮಾಡಲಿ; ನಮ್ಮ ಮನೆಯನ್ನು ಧ್ವಂಸಗೊಳಿಸಲಿ, ನೋಟಿಸ್ ನೀಡಲಿ.. ಇವುಗಳಿಗೆ ನಾನು ಮಣಿಯುವುದಿಲ್ಲ. ಏನೇ ಬರಲಿ, ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

 

Leave a Reply