ಮುಂಬೈ : ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ : ಇಬ್ಬರ ಬಂಧನ – vishwanews24
ಮುಂಬೈ : ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ : ಇಬ್ಬರ ಬಂಧನ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್ (35), ಅಭಯ್ ಶಿಂಗ್ನೆ (22) ಬಂಧಿತ ಆರೋಪಿಗಳು. ಇಬ್ಬರನ್ನೂ ಬುಲ್ದಾನಾ ಪೊಲೀಸರು ಬಂಧಿಸಿದ್ದಾರೆ ಎಂದು ಡಿಸಿಪಿ ದತ್ತ ನಲವಾಡೆ ತಿಳಿಸಿದ್ದಾರೆ.
ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರ ಸಂಕಷ್ಟ ನಿವಾರಿಸಿ :ಸರಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ – vishwanews24
ಏಕನಾಥ್ ಶಿಂಧೆ ಅವರ ಕಾರಿಗೆ ಬಾಂಬ್ ಹಾಕುವುದಾಗಿ ಗೋರೆಗಾಂವ್ ಮತ್ತು ಜೆ.ಜೆ ಮಾರ್ಗ್ ಪೊಲೀಸ್ ಠಾಣೆಗಳಿಗೆ ಇ-ಮೇಲ್ ಬೆದರಿಕೆ ಸಂದೇಶಗಳು ಬಂದಿದ್ದವು. ಮರಾಠಿ ಭಾಷೆಯಲ್ಲಿದ್ದ ಇ-ಮೇಲ್ಗಳನ್ನು ಬೇರೆ ಬೇರೆ ಹೆಸರುಗಳಲ್ಲಿ ಎರಡೂ ಪೊಲೀಸ್ ಠಾಣೆಗಳಿಗೆ ಆರೋಪಿಗಳು ಕಳುಹಿಸಿದ್ದರು. ಇ-ಮೇಲ್ ಐಪಿ ಅಡ್ರಸ್ಗಳನ್ನು ಟ್ರ್ಯಾಕ್ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಅಪರಿಚಿತರಿಂದ ಬಂದ ಇ-ಮೇಲ್ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ಗಳ 351 (3) ಮತ್ತು 353 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ – vishwanews24
