ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಮಸೀದಿಯ ಮುಂದೆ ಹನುಮಾನ್ ಚಾಲೀಸ್ ನುಡಿಸುತ್ತೇವೆ : ರಾಜ್ ಠಾಕ್ರೆ ಎಚ್ಚರಿಕೆ – VIshwanews24

Featured, ರಾಷ್ಟ್ರ ನ್ಯೂಸ್

 ಪ್ರಾರ್ಥನೆ ನೀವು ನಿಮ್ಮ ಮನೆಯಲ್ಲಿ ಮಾಡಬಹುದು..

ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್‍ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಉಡುಪಿ : ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.8ರಿಂದ 11ರವರೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ – Vishwanews24

 

Leave a Reply