ಮುಡಾ ಹಗರಣದಲ್ಲಿ ನನ್ನ ಹಾಗೂ ಸಿಎಂ ಪತ್ನಿಯ ಪಾತ್ರ ಸೊನ್ನೆ : ಸಚಿವ ಬೈರತಿ ಸುರೇಶ್ – vishwanews24

Featured, ರಾಜ್ಯ ನ್ಯೂಸ್

ಮುಡಾ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯ ಪಾತ್ರ ಸೊನ್ನೆ : ಸಚಿವ ಬೈರತಿ ಸುರೇಶ್

ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.

ಜಾರಿ ನಿರ್ದೇಶನಾಲಯದ  ನೋಟಿಸ್‌ಗೆ ಹೈಕೋರ್ಟ್‌  ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್‌ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದರು.

ಉಳ್ಳಾಲ: 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಾರಸುದಾರರಿಗೆ ಹಿಂದಿರುಗಿಸಿದ ಯುವಕ – vishwanews24

ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದಕ್ಕೆ ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು.

ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನು ಪಡೆದಿಲ್ಲ, ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ ಹಾಗಾಗಿ ಸ್ಟೇ ಕೊಟ್ಟಿದ್ದಾರೆ. ನನಗೆ ಕೊಟ್ಟಿರುವುದು ಒಂದೇ ನೋಟಿಸ್, ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ – vishwanews24

Leave a Reply