ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ? vishwanews24

Featured, ರಾಜ್ಯ ನ್ಯೂಸ್

ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ?

ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ‌ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿಯನ್ನು ನೇಮಕ ಮಾಡಿದೆ.

ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮಿ ಕಾಂತರೆಡ್ಡಿ ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಬೆಂಗಳೂರಿನ ಕೆಯುಐಡಿಎಫ್​ಸಿಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಲಕ್ಷ್ಮಿಕಾಂತ್​ ರೆಡ್ಡಿಯನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ – vishwanews24

ಈ ಹಿಂದೆ ಮುಡಾ ಹಗರಣದ ಬಗ್ಗೆ ಡಿಸಿ ಕೆ.ವಿ ರಾಜೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಮುಡಾದ 50:50 ಸೈಟು ವಿಷಯದಲ್ಲಿ ಸರ್ಕಾರದ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಡಿಸಿ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆಯಾಗಿದೆ. ಕೆವಿ ರಾಜೇಂದ್ರ ಸೇರಿದಂತೆ ಒಟ್ಟು 21 ಐಎಎಸ್​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಏನಿದು ಮುಡಾ ಹಗರಣ..?
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೇ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ.

ಬ್ರಿಟನ್‌ ಸಾರ್ವತ್ರಿಕ ಚುನಾವಣೆ: ಸೋಲೊಪ್ಪಿಕೊಂಡ  ರಿಷಿ ಸುನಕ್‌ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ ..vishwanews24

Leave a Reply