ಮೂಡಬಿದ್ರಿ : ರಸ್ತೆ ಬದಿ ದನದ ತಲೆ ಪತ್ತೆ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಕಾಂಗ್ರೆಸ್‌ನಿಂದ ಕಮೀಷನರ್‌ಗೆ ಮನವಿ – Vishwanews24

Featured, ದಕ್ಷಿಣ ಕನ್ನಡ

ಮೂಡಬಿದ್ರಿ : ರಸ್ತೆ ಬದಿ ದನದ ತಲೆ ಪತ್ತೆ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಕಾಂಗ್ರೆಸ್‌ನಿಂದ ಕಮೀಷನರ್‌ಗೆ ಮನವಿ – Vishwanews24

ಮೂಡಬಿದ್ರಿ: ಗೋವಿನ ರುಂಡ ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ.

ನಿನ್ನೆ ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿ ಸಮಾಜದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ಮಾಡಲಾಗಿದೆ.

ಅಲ್ಲದೆ, ಪರಿಸರದಲ್ಲಿ ನಿರಂತರ ಗೋ ಕಳ್ಳತನ ನಡೆಯುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ, ರಾಜೇಶ್ ಕಡಲೆಕೆರೆ, ಪುರಂದರ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ :  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಚೀಫ್ ಮ್ಯಾನೇಜರ್ ಸುರೇಶ್ ಶೆಣೈ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆ – VIshwanews24

Leave a Reply