ಮೈಸೂರು: ಕಾಡಾನೆ ದಾಳಿ – ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ – Vishwanews24
ಮೈಸೂರು: ಕಾಡಾನೆ ದಾಳಿ – ದಸರಾ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಆನೆ ದುರಂತ ಅಂತ್ಯ
ಮೈಸೂರು: ಕಾಡಾನೆ ದಾಳಿಯಿಂದಾಗಿ ದಸರಾದ ಆನೆಯೊಂದು ಸಾವನ್ನಪ್ಪಿದ ಘಟನೆ ಬುಧವಾರದಂದು ವರದಿಯಾಗಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ.
ಗೋಪಾಲಸ್ವಾಮಿ ಆನೆ ಮಂಗಳವಾರ ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಿಗೆ ಮೇಯಲು ಹೋಗಿದ್ದಾಗ ಸಂದರ್ಭದಲ್ಲಿ ಕಾಡಾನೆಗಳು ದಾಳಿ ನಡೆಸಿವೆ ಎಂದು ವರದಿಯಾಗಿದೆ.
ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24
ಈ ಆನೆಯನ್ನು 2009ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದ ಎತ್ತೂರಿನಲ್ಲಿ ಸೆರೆ ಹಿಡಿಯಲಾಗಿತ್ತು. ಸೌಮ್ಯ ಸ್ವಭಾವದ ಈ ಆನೆ ಕಳೆದ ಹತ್ತು ವರ್ಷಗಳಿಂದ ದಸರಾ ಉತ್ಸವದಲ್ಲಿ ಭಾಗವಹಿಸುತ್ತಿತ್ತು.
ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24
ಮಂಗಳೂರು :ಮೂರು ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಸ್ಥಗಿತ : ಜಿಲ್ಲಾಧಿಕಾರಿ – Vishwanews24
