ಮೈಸೂರು ದಸರಾಗೆ ಮೆರಗು ತಂದಿದ್ದ ಆನೆ ‘ದ್ರೋಣ’ ಇನ್ನಿಲ್ಲ – Vishwanews24
ಮೈಸೂರು: ಮೈಸೂರು ದಸರಾ ಆನೆ ದ್ರೋಣ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದೆ.
ಹುಣಸೂರು ತಾಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 39 ವರ್ಷದ ದ್ರೋಣ ಬೆಳಗ್ಗೆ 11 ಗಂಟೆ ವೇಳೆಗೆ ನೀರು ಕುಡಿಯುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದೆ. ಸದ್ಯ ಆನೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಕಳೆದ ವರ್ಷ ಮೊದಲ ಬಾರಿಗೆ ದಸರಾ ಅಂಬಾರಿ ಆನೆಯ ಜತೆಯಲ್ಲಿ ಪಾಲ್ಗೊಂಡಿದ್ದ ದ್ರೋಣ (39) ಇನ್ನಿಲ್ಲ. ಮತ್ತಿಗೋಡು ಶಿಬಿರದ ದ್ರೋಣ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ.
ದಸರಾ ಆನೆಗಳ ಬಳಗದ ಹಿರಿಯ ‘ದ್ರೋಣ’ ಸತತ 18 ವರ್ಷಗಳ ಕಾಲ (1981-1997) ಚಿನ್ನದ ಅಂಬಾರಿ ಹೊತ್ತು ದಾಖಲೆ ಮಾಡಿದ್ದ. 1998ರಲ್ಲಿ ಮೇಯಲು ಹೋಗಿದ್ದಾಗ ವಿದ್ಯುತ್ ತಗುಲಿ ಸಾವಿಗೀಡಾಗಿದ್ದ.
ಬಳಿಕ ಮತ್ತೊಂದು ಕಿರಿಯ ಆನೆಗೆ ದ್ರೋಣ ಎಂದು ನಾಮಕರಣ ಮಾಡಲಾಗಿತ್ತು. ಮೈಸೂರು ದಸರಾ ಆನೆಗಳ ಬಳಗ ಸೇರಿದ್ದ ಕಿರಿಯ ದ್ರೋಣ ಕಳೆದ ವರ್ಷ ಮೊದಲ ಬಾರಿಗೆ ದಸರಾದಲ್ಲಿ ಪಾಲ್ಗೊಂಡಿತ್ತು.
