ಮೈಸೂರು: ಹೃದಯಾಘಾತ – ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು – vishwanews24
ಮೈಸೂರು: ಹೃದಯಾಘಾತ – ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ.
ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ರಘುಪತಿ ಭಟ್ ಆಯ್ಕೆ – vishwanews24
