ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಎ.ನಾರಾಯಣಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಎ.ನಾರಾಯಣಸ್ವಾಮಿ -Vishwanews24

ಚಿತ್ರದುರ್ಗ: ಚಿತ್ರದುರ್ಗದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದ ಎ.ನಾರಾಯಣಸ್ವಾಮಿ ಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ.

ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ನಾರಾಯಣಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುವುದು ಖಚಿತವಾಗಿದೆ.

ಮಂಗಳವಾರವೇ ಸಂಸದ ಎ.ನಾರಾಯಣಸ್ವಾಮಿ ಅವರು ಕುಟುಂಬ ಸಮೇತ ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಈಗ ಅಧಿಕೃತವಾಗಿ ನಾರಾಯಣಸ್ವಾಮಿ ಅವರೇ ಈ ವಿಷಯ ಬಹಿರಂಗಪಡಿಸಿದ್ದು, ಎಡಗೈ ದಲಿತ ಸಮುದಾಯದಿಂದ ಬಂದ ನನ್ನನ್ನು ಬಿಜೆಪಿ ಗುರುತಿಸಿ ಸಚಿವ ಸ್ಥಾನ ನೀಡಿದೆ, ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸದಸ್ಯನಾಗಿರುವುದು ನನ್ನ ಭಾಗ್ಯ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿ, ಅಸಹಾಯಕರ ಧ್ವನಿಯಾಗುತ್ತೇನೆ‌ ಎಂದು ಸಂತಸ ಹಂಚಿಕೊಂಡಿದ್ದಾರೆ.