ಮೋದಿಯಂತಹ ಸಹೋದರನನ್ನು ಪಡೆದ ನಾನು ಧನ್ಯ , ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ : ಪ್ರಧಾನಿ ಸಹೋದರ ದಾಮೋದರದಾಸ್ ಮೋದಿ -Vishwanews24
ಬಂಟ್ವಾಳ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಗಾಳಿ ಇದ್ದಂತೆ. ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭ ಪ್ರಧಾನಿಯಾಗಿರುವ ನರೇಂದ್ರ ಮೋದಿ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡರು. ಅಂಥಹ ಸಹೋದರನನ್ನು ಪಡೆದ ನಾನು ಧನ್ಯನಾಗಿದ್ದು, ದೇಶವನ್ನು ಎತ್ತರಕ್ಕೇರಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದರು.
ಇನ್ನು ಈ ನಡುವೆ ಶಾಲೆಯ ಶಿಕ್ಷಕ ವೃಂದದ ಕಾರ್ಯವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಪ್ರಧಾನಿಯೊಂದಿಗೆ ಭೇಟಿಯಾಗುವ ಅವಕಾಶವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.

