“ಮೋದಿ ಮತ್ತೊಮ್ಮೆ” ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು : ಶೀಲಾ ಕೆ. ಶೆಟ್ಟಿ – Vishwanews24
ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ.
ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು.
ಕಾಪು ವೀರಭದ್ರ ಸಭಾಭವನದಲ್ಲಿ ಮಂಗಳವಾರ ನಡೆದ ಕಾಪು ಕ್ಷೇತ್ರ ಬಿಜೆಪಿ ಕಾರ್ಯಕಾರಣಿಯನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷ ದ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಮೂಲಕ ಬಿಜೆಪಿ ಪಕ್ಷ ದ ಸಿದ್ಧಾಂತ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಬಿಜೆಪಿಗೆ ಕಾರ್ಯಕರ್ತರೇ ಪ್ರಮುಖ ಆಸ್ತಿ. ಕಾರ್ಯಕರ್ತರ ಮೂಲಕವೇ ಅಧಿಕಾರಕ್ಕೆ ಬಂದಿರುವ ಸರಕಾರ ನಮ್ಮದು. ಅದೇ ಕಾರ್ಯಕರ್ತರ ಬಲದಿಂದಲೇ ಬಹುಮತದೊಂದಿಗೆ ಚುಣಾವಣೆಯಲ್ಲಿ ಗೆಲ್ಲಿಸೋಣ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾರ್ಯದರ್ಶಿಗಳಾದ ಸುನೀತಾ ನಾಯಕ್, ಸಂಧ್ಯಾ ರಮೇಶ್, ರಮಾಕಾಂತ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

