ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ : ದಿನೇಶ್ ಗುಂಡೂರಾವ್ – Vishwanews24
ಸುಳ್ಯ: ಐದು ವರ್ಷಗಳ ಕಾಲ ಜನವಿರೋಧಿ ಆಡಳಿತ ನಡೆಸಿದ ಮೋದಿ ಸರ್ಕಾರ ತೊಲಗಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಕಾಂಗ್ರೆಸ್- ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ಅಧಿಕಾರ ಪಡೆದ ಅನಂತರ ಅವರ ಆಳ್ವಿಕೆ, ನೀತಿಗಳನ್ನು ಪ್ರಶ್ನಿಸುವ ಸ್ವಾತಂತ್ರ್ಯ ಕಳೆದು ಹೋಗಿದೆ. ಸಿಬಿಐ ಮೊದಲಾದ ಸಾಂವಿಧಾನಿಕ ಅಧಿಕಾರದ ವ್ಯವಸ್ಥೆಯನ್ನು ತನಗೆ ಬೇಕಾದ ಹಾಗೆ ಬಳಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು.
ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥ್, ಸಚಿವ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಅಭ್ಯರ್ಥಿ ಮಿಥುನ್ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ, ಕೆಪಿಸಿಸಿ ಸದಸ್ಯ ಅಕ್ಬರ್, ಕಣಚೂರು ಮೋನು, ವೆಂಕಪ್ಪ ಗೌಡ, ಭರತ್ ಮುಂಡೋಡಿ, ಟಿ.ಎಂ.ಶಹೀದ್, ಡಾ.ರಘು, ಕುಂಬ್ರ ದಯಾಕರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
