ಯಾದಗಿರಿ : ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ – Vishwanews24

Featured, ರಾಜ್ಯ ನ್ಯೂಸ್

ಯಾದಗಿರಿ: ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು – ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ 

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದಾರೆ.

ಈ ವೇಳೆ ಕೊಡೆಕಲ್‌ ಸಮಾರಂಭದ ವೇದಿಕೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.

ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾಕಿ ಎಂದು ಮೋದಿ ಭಾಷಣ ಶುರು ಮಾಡಿದ್ದಾರೆ. ಕರ್ನಾಟಕದ ಎಲ್ಲ ಸಹೋದರ, ಸಹೋದರಿಯರಿಗೆ ವಂದನೆಗಳು ತಿಳಿಸಿದ್ದಾರೆ. ಎಲ್ಲಿವರೆಗೆ ದೃಷ್ಟಿ ಹಾಯಿಸಿದರೂ ಅಲ್ಲಿವರೆಗೆ ಜನ ಕಾಣುತ್ತಿದ್ದಾರೆ.

ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ  :ವಿನಯ ಕುಮಾರ್ ಸೊರಕೆ – Vishwanews24

ಯಾದಗಿರಿ ಜಿಲ್ಲೆಯ ಸಮೃದ್ಧ ಇತಿಹಾಸವನ್ನು ಹೊಂದಿದೆ. ಯಾದಗಿರಿ ದೊಡ್ಡ ಇತಿಹಾಸ, ಪರಂಪರಯೇ ಇದೆ. ರಟ್ಟೀಹಳ್ಳಿಯ ಕೋಟೆ ನಮ್ಮ ಪೂರ್ವಜರ ಪ್ರತೀಕವಾಗಿದೆ. ನೀರು ಸರಬರಾಜು ಬೃಹತ್‌ ಯೋಜನೆಗೆ ಚಾಲನೆ ನೀಡಿದ್ದಾರೆ. ನೀರಾವರಿ ಹೆದ್ದಾರಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಯಾದಗಿರಿ, ಕಲಬುರಗಿ, ವಿಜಯಪುರ, ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ರಾಜಾ ವೆಂಕಟಪ್ಪರನ್ನು ಪ್ರಧಾನಿ ಮೋದಿ ನೆನೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Leave a Reply