ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

Featured, ದಕ್ಷಿಣ ಕನ್ನಡ

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೂಡೂರು ನಿವಾಸಿ ತಮೀಮ್ ಅವರ ಪುತ್ರ ಸುಫಿಯಾನ್ (23) ಮಂಗಳೂರಿನ ಮುನ್ನೂರು ಪ್ರದೇಶದಲ್ಲಿರುವ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ 16, 2026ರಂದು ಸಂಜೆ ಕೆಲಸಕ್ಕೆ ತೆರಳಿದ್ದ ಅವರು, ಮೇ 17ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ದೂರವಾಣಿ ಮೂಲಕ ಕುಟುಂಬದವರನ್ನು ಸಂಪರ್ಕಿಸಿ ತಾನು ಕೆಲಸದ ಸ್ಥಳ ತಲುಪಿರುವುದಾಗಿ ತಿಳಿಸಿದ್ದರು.

ಆದರೆ, ಬಳಿಕ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರು ಹಾಗೂ ಸಂಬಂಧಿಕರು ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಸುಫಿಯಾನ್ ಅವರ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 59/2026ರಂತೆ “ಗಂಡಸು ಕಾಣೆ” ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ನಾಪತ್ತೆಯಾದ ಯುವಕನ ವಿವರ:

* ಹೆಸರು: ಸುಫಿಯಾನ್
* ತಂದೆಯ ಹೆಸರು: ತಮೀಮ್
* ವಯಸ್ಸು: 23 ವರ್ಷ
* ಎತ್ತರ: ಸುಮಾರು 5.6 ಅಡಿ
* ಮೈಬಣ್ಣ: ಕಪ್ಪು
* ಚಹರೆ: ಸಾಧಾರಣ ಶರೀರ
* ವಿಶೇಷ ಗುರುತು: ಬಲ ಭುಜದ ಮೇಲೆ ಸುಟ್ಟ ಗಾಯದ ಗುರುತು
* ಶಿಕ್ಷಣ: 10ನೇ ತರಗತಿ ತನಕ ವಿದ್ಯಾಭ್ಯಾಸ
* ಧರಿಸಿದ್ದ ಉಡುಪು: ಕಪ್ಪು ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್
* ತಿಳಿದಿರುವ ಭಾಷೆ: ಕನ್ನಡ

ಸುಫಿಯಾನ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536 / 9480802350) ಸಂಖ್ಯೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24

Leave a Reply